ಅಲ್ಲು ಅರ್ಜುನ್ ರಾಷ್ಟ್ರಪ್ರಶಸ್ತಿ ಪಡೆದ ಬೆನ್ನಲ್ಲೇ ಮಹೇಶ್ ಬಾಬು ಹಳೆಯ ಟ್ವೀಟ್ ವೈರಲ್; ಏನಿದೆ ಇದರಲ್ಲಿ?

ಸುಕುಮಾರ್ ಅವರು ಮಹೇಶ್ ಬಾಬು ಜೊತೆ ಸಿನಿಮಾ ಮಾಡಬೇಕಿತ್ತು. ಮಹೇಶ್ ಬಾಬುಗಾಗಿ ಅವರು ವರ್ಷಕ್ಕೂ ಅಧಿಕ ಕಾಲ ಕಾದರು. ಆದರೆ, ಮಹೇಶ್ ಬಾಬು ಕೊನೆಯ ಕ್ಷಣದಲ್ಲಿ ಸಿನಿಮಾದಿಂದ ಹೊರ ಬಂದರು. 2019ರಲ್ಲಿ ‘ಪುಷ್ಪ’ ಸಿನಿಮಾದ ಮುಹೂರ್ತ ಸಮಾರಂಭ ನಡೆಯಿತು. ಈ ವೇಳೆ ಮಹೇಶ್ ಬಾಬು ಟ್ವೀಟ್ ಒಂದನ್ನು ಮಾಡಿದ್ದರು.

ಅಲ್ಲು ಅರ್ಜುನ್ ರಾಷ್ಟ್ರಪ್ರಶಸ್ತಿ ಪಡೆದ ಬೆನ್ನಲ್ಲೇ ಮಹೇಶ್ ಬಾಬು ಹಳೆಯ ಟ್ವೀಟ್ ವೈರಲ್; ಏನಿದೆ ಇದರಲ್ಲಿ?
ಮಹೇಶ್ ಬಾಬು
Follow us
| Updated By: Vimal Kumar

Updated on: Sep 19, 2023 | 1:51 PM

2021ರಲ್ಲಿ ರಿಲೀಸ್ ಆಗಿ ಭರ್ಜರಿ ಕಮಾಯಿ ಮಾಡಿದ ‘ಪುಷ್ಪ’ ಸಿನಿಮಾದ (Pushpa Movie) ನಟನೆಗೆ ಅಲ್ಲು ಅರ್ಜುನ್ (Allu Arjun) ರಾಷ್ಟ್ರಪ್ರಶಸ್ತಿ ಪಡೆದಿದ್ದಾರೆ. ಅಲ್ಲು ಕುಟುಂಬದ ಖುಷಿ ಹೆಚ್ಚಾಗಿದೆ. ಟಾಲಿವುಡ್ ಮಂದಿ ಇದನ್ನು ಸಂಭ್ರಮಿಸಿದ್ದಾರೆ. ಈ ಚಿತ್ರದ ನಿರ್ದೇಶಕ ಸುಕುಮಾರ್ ಅವರಿಗೆ ಮತ್ತಷ್ಟು ಚೈತನ್ಯ ಸಿಕ್ಕಿದೆ. ಈ ಮಧ್ಯೆ ಮಹೇಶ್ ಬಾಬು ಅವರ ಹಳೆಯ ಟ್ವೀಟ್ ಒಂದು ವೈರಲ್ ಆಗಿದೆ. ಈ ಟ್ವೀಟ್ ನೋಡಿದ ಅನೇಕರು ಮಹೇಶ್ ಬಾಬು ರಾಷ್ಟ್ರಪ್ರಶಸ್ತಿ ಮಿಸ್ ಮಾಡಿಕೊಂಡರು ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ಏನಿದು ವಿಚಾರ? ಇಲ್ಲಿದೆ ಮಾಹಿತಿ.

2018ರಲ್ಲಿ ‘ರಂಗಸ್ಥಳಂ’ ಸಿನಿಮಾ ರಿಲೀಸ್ ಆದ ಬಳಿಕ ಸುಕುಮಾರ್ ಅವರು ಮಹೇಶ್ ಬಾಬು ಜೊತೆ ಸಿನಿಮಾ ಮಾಡಬೇಕಿತ್ತು. ಮಹೇಶ್ ಬಾಬುಗಾಗಿ ಅವರು ವರ್ಷಕ್ಕೂ ಅಧಿಕ ಕಾಲ ಕಾದರು. ಆದರೆ, ಮಹೇಶ್ ಬಾಬು ಕೊನೆಯ ಕ್ಷಣದಲ್ಲಿ ಸಿನಿಮಾದಿಂದ ಹೊರ ಬಂದರು. 2019ರಲ್ಲಿ ‘ಪುಷ್ಪ’ ಸಿನಿಮಾದ ಮುಹೂರ್ತ ಸಮಾರಂಭ ನಡೆಯಿತು. ಈ ವೇಳೆ ಮಹೇಶ್ ಬಾಬು ಟ್ವೀಟ್ ಒಂದನ್ನು ಮಾಡಿದ್ದರು.

‘ವಿಚಾರಗಳು ಹೊಂದಿಕೆ ಆಗದ ಕಾರಣ ಸುಕುಮಾರ್ ಜೊತೆಗಿನ ನನ್ನ ಸಿನಿಮಾ ಸೆಟ್ಟೇರುತ್ತಿಲ್ಲ. ಅವರ ಹೊಸ ಪ್ರಾಜೆಕ್ಟ್​ಗೆ ನಾನು ವಿಶ್ ತಿಳಿಸುತ್ತಿದ್ದೇನೆ. 1: ನೀನೊಕ್ಕಡೆನೆ ಸಿನಿಮಾ ಯಾವಾಗಲೂ ಕಲ್ಟ್ ಕ್ಲಾಸಿಕ್ ಸಿನಿಮಾ ಆಗಿರುತ್ತದೆ. ಈ ಸಿನಿಮಾದಲ್ಲಿ ಕೆಲಸ ಮಾಡಿದ ಪ್ರತಿಕ್ಷಣವನ್ನು ಆನಂದಿಸಿದ್ದೆ’ ಎಂದು ಟ್ವೀಟ್ ಮಾಡಿದ್ದರು ಮಹೇಶ್ ಬಾಬು.

ಇದನ್ನೂ ಓದಿ: ಜನವರಿಯಲ್ಲೂ ‘ಗುಂಟೂರು ಖಾರಂ’ ರಿಲೀಸ್ ಆಗೋದು ಅನುಮಾನ ಎಂದವರಿಗೆ ಮಹೇಶ್ ಬಾಬು ಉತ್ತರ

‘ಮಹೇಶ್ ಬಾಬು ಈ ಮೊದಲು ‘ಪುಷ್ಪ’ ಚಿತ್ರದಲ್ಲಿ ನಟಿಸಬೇಕಿತ್ತು. ಆದರೆ, ಅವರು ಒಪ್ಪದ ಕಾರಣ ಅಲ್ಲು ಅರ್ಜುನ್ ಕೈ ಸೇರಿತು. ಮಹೇಶ್ ಬಾಬು ರಾಷ್ಟ್ರಪ್ರಶಸ್ತಿ ಮಿಸ್ ಮಾಡಿಕೊಂಡರು’ ಎಂದೆಲ್ಲ ಕೆಲವರು ಟ್ವೀಟ್ ಮಾಡಿದ್ದಾರೆ. ಆದರೆ, ಮಹೇಶ್ ಬಾಬು ಅವರಿಗೆ ಹೇಳಿದ್ದ ಕಥೆ ‘ಪುಷ್ಪ’ ಚಿತ್ರದ್ದಲ್ಲ ಎನ್ನಲಾಗಿದೆ. ಸದ್ಯ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಭರ್ಜರಿ ಚರ್ಚೆ ಆಗುತ್ತಿದೆ.

ಅಲ್ಲು ಅರ್ಜುನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ‘ಪುಷ್ಪ’ ಚಿತ್ರದಲ್ಲಿ ಅವರು ನಟಿಸಿದ ರೀತಿಗೆ ಎಲ್ಲರೂ ಫಿದಾ ಆಗಿದ್ದಾರೆ. ಅವರಿಗೆ ರಾಷ್ಟ್ರಪ್ರಶಸ್ತಿ ಸಿಕ್ಕಿದ್ದು ಅರ್ಹವಾಗಿದೆ ಎಂದು ಅನೇಕರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:08 am, Fri, 25 August 23

ತಾಜಾ ಸುದ್ದಿ
bud 4icket Booking: IRCTCಯಲ್ಲಿ ರೈಲು ಟಿಕೆಟ್ ಬುಕ್ ಮಾಡುವಾಗ ಎಚ್ಚರಿಕ
bud 4icket Booking: IRCTCಯಲ್ಲಿ ರೈಲು ಟಿಕೆಟ್ ಬುಕ್ ಮಾಡುವಾಗ ಎಚ್ಚರಿಕ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ