Horoscope: ದಿನಭವಿಷ್ಯ, ಈ ರಾಶಿಯವರಿಗೆ ನಿಮ್ಮ ಉತ್ಸಾಹವನ್ನು ಶತ್ರುಗಳು ನಿರುತ್ಸಾಹಗೊಳಿಸಬಹುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 25) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ, ಈ ರಾಶಿಯವರಿಗೆ ನಿಮ್ಮ ಉತ್ಸಾಹವನ್ನು ಶತ್ರುಗಳು ನಿರುತ್ಸಾಹಗೊಳಿಸಬಹುದು
ರಾಶಿ ಭವಿಷ್ಯ
Follow us
| Updated By: Vimal Kumar

Updated on: Sep 19, 2023 | 1:52 PM

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 25) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ನಿಜ ಶ್ರಾವಣ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ನವಮೀ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ವೈಧೃತಿ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 20 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 48 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:08 ರಿಂದ 03:42ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:21 ರಿಂದ 07:54ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:28 ರಿಂದ 11:01ರ ವರೆಗೆ.

ಶ್ರಾವಣ ಮಾಸದ ಶುಕ್ರವಾರಗಳು ಅತ್ಯಂತ ಶ್ರೇಷ್ಠವಾದ ವಾರಗಳಾಗಿವೆ. ಅದರಲ್ಲಿಯೂ ಈ ಬಾರಿ ನವಮೀ ತಿಥಿಯು ಸೇರಿಕೊಂಡಿದ್ದು ಮತ್ತಷ್ಟು ವಿಶೇಷ. ದುರ್ಗೆಯರು ಒಂಭತ್ತು ಮತ್ತು ನವಮಿಯ ಅಧಿದೇವತೆಯು ದುರ್ಗೆಯಾಗಿದ್ದು ಶುಕ್ರವಾರವೂ ಬಂದಿರುವ ಕಾರಣ ಬಹಳ ಶ್ರೇಷ್ಠವಾದ ದಿನವಾಗಿದೆ. ಇಷ್ಟಾರ್ಥಗಳು, ಸಂಪತ್ ಸಮೃದ್ಧಿ, ಎಲ್ಲವೂ ಬರಲಿದೆ.

ಸಿಂಹ ರಾಶಿ : ನಿಮ್ಮ ಇಂದಿನ ದೀರ್ಘ ಪ್ರಯಾಣವು ಹಲವು ತೊಡಕುಗಳಿಂದ ಇರಬಹುದು. ವಾಹನ ವಿಚಾರವಾಗಿ ಮನೆಯಲ್ಲಿ ಕಲಹವಾಗಬಹುದು.‌ ಸಂಗಾತಿಯ ಮಾತಿಗೆ ನಿಮ್ಮ ಪ್ರತಿಕ್ರಿಯೆಯು ಇಲ್ಲದಿರುವುದು ಬೇಸರವನ್ನು ತರಿಸಬಹುದು. ಸಾರ್ವಜನಿಕ ಕ್ಷೇತ್ರದಲ್ಲಿ ನಿಮ್ಮ ಹೆಸರು ಹೆಚ್ಚು ಕೇಳಿಬರಲಿದೆ. ನಿಮ್ಮ ಉತ್ಸಾಹವನ್ನು ಶತ್ರುಗಳು ನಿರುತ್ಸಾಹಗೊಳಿಸಬಹುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಆಹಾರದಲ್ಲಿ ನಿಯಮಿತಿ ಇರಲಿ. ಪಿತ್ತಸಂಬಂಧಿ ರೋಗವು ಕಾಣಿಸಿಕೊಳ್ಳಬಹುದು. ಇತಿಹಾಸಕ್ಕೆ ವಿಚಾರದಲ್ಲಿ ಶೋಧನೆಯನ್ನು ಮಾಡುವಿರಿ. ನಿಮ್ಮ ಕೆಲಸಗಳನ್ನು ಇನ್ನೊಬ್ಬರಿಗೆ ಕೊಟ್ಟುಬಿಡುವಿರಿ.

ಕನ್ಯಾ ರಾಶಿ : ಕೆಲವು ವಿಚಾರದಲ್ಲಿ ನಿಮಗೆ ಸೂಕ್ಷ್ಮತೆಯ ಕೊರತೆಯು ಕಾಣುವುದು. ನಿಮ್ಮದೇ ಆದ ದಾರಿಯಲ್ಲಿ ನೀವು ಸಾಗುವಿರಿ. ವಿದ್ಯಾರ್ಥಿಗಳು ಓದಿನ ಬಗ್ಗೆ ಗಮನವನ್ನು ಹೆಚ್ಚುಕೊಡಬೇಕಾದೀತು. ಜನರ ಜೊತೆ ಬೆರೆಯುವುದು ಕಷ್ಟವಾದೀತು.‌ ದೂರ ಊರಿಗೆ ಕುಟುಂಬ ಸಹಿತವಾಗಿ ಪ್ರಯಾಣವನ್ನು ಮಾಡಬಹುದು. ಸ್ಥಿರಾಸ್ತಿಯ ವಿಚಾರವಾಗಿ ನೆರೆಯವರ ಜೊತೆ ಜಗಳವಾಗಬಹುದು. ವಿದೇಶೀ ವ್ಯಾಪಾರದಿಂದ ನಷ್ಟವಾಗಬಹುದು. ಉದ್ಯೋಗದಲ್ಲಿ ನಿಮ್ಮ ಮನಃಸ್ಥಿತಿಯು ಖಿನ್ನವಾಗಲಿದೆ. ನಿಮಗೆ ಹಣವನ್ನು ಉಳಿಸಿಕೊಳ್ಳುವುದು ಸಮಸ್ಯೆಯೇ ಆಗಬಹುದು.

ತುಲಾ ರಾಶಿ : ಉದ್ಯಮದಲ್ಲಿ ಆಗುವ ಒತ್ತಡವನ್ನು ನಿವಾರಿಸಿಕೊಳ್ಳಲು ಅನ್ಯ ಮಾರ್ಗವನ್ನು ಕಂಡುಕೊಳ್ಳಿ.‌ ಇಲ್ಲವಾದರೇ ಇದೇ ನಿಮ್ಮ ಆರೋಗ್ಯದ ಮೇಲೆ‌ ದುಷ್ಪರಿಣಾಮವನ್ನು ಉಂಟುಮಾಡಬಹುದು. ನಿಮಗೆ ಸಿಗಬೇಕಾದ ಗೌರವವು ಕೊನೆಗೂ ನಿಮಗೇ ಸಿಗಲಿದೆ. ನಿಮ್ಮ ವಿರುದ್ಧ ನಡೆಸುವ ತಂತ್ರಗಾರಿಕೆಯು ನಿಲ್ಲದು. ಹಿರಿಯರ ಜೊತೆ ಕಳೆದ ಸಮಯವು ನಿಮಗೆ ಉತ್ಸಾಹವನ್ನು ಕೊಡುವುದು. ನಿಮ್ಮ ಆರ್ಥಿಕ ವ್ಯವಸ್ಥೆಯನ್ನು ಸರಿ‌ಮಾಡಿಕೊಳ್ಳಿ. ಲೆಕ್ಕಪತ್ರದ ವಿಷಯದಲ್ಲಿ ನಿಮಗೆ ಯಾವುದೇ ಅಡ್ಡ ದಾರಿಯನ್ನು ಹಿಡಿಯುವುದು ಬೇಡ. ನಿಮ್ಮ ಸ್ವಾಭಿಮಾನಕ್ಕೆ ತೊಂದರೆಯಾಗಬಹುದು.

ವೃಶ್ಚಿಕ ರಾಶಿ : ಗೃಹ ಬಳಕೆಗೆ ಬೇಕಾದ ಸಾಮಾನುಗಳನ್ನು ನೀವು ಖರೀದಿಸುವ ಭರದಲ್ಲಿ ಖರ್ಚಿನ ಬಗ್ಗೆಯೂ ಸೂಕ್ತ ಆಲೋಚನೆಯನ್ನು ಮಾಡಿ. ನಿಮ್ಮ ಇಂದಿನ ಸಂದರ್ಭಗಳು ಬಹಳ ಸೂಕ್ಷ್ಮವಾಗಿದ್ದು ಅದನ್ನು ನಿಭಾಯಿಸುವ ಕ್ರಮವನ್ನೂ ನೀವು ಅರಿಯಬೇಕಾಗಬಹುದು. ಮೇಲಧಿಕಾರಿಗಳ ಜೊತೆ ನಿಮ್ಮ ಒಡನಾಟವು ಚೆನ್ನಾಗಿರುವುದು. ನಿಮ್ಮ ಗುರಿಯ ಬಗ್ಗೆ ಕೆಲವರು ಆಡಿಕೊಂಡಾರು. ಅದನ್ನು ಕೇಳಿಸಿಕೊಳ್ಳದೇ ಮುಂದಡಿ ಇಡಿ. ಕೆಲವು ರಾಜಕೀಯ ವ್ಯಕ್ತಿಗಳ ಪ್ರೇರಣೆಯಿಂದ ನೀವೂ ರಾಜಕೀಯಕ್ಕೆ ಬರುವ ಸಾಧ್ಯತೆ ಇದೆ. ನಿಮ್ಮದೇ ಕೆಲಸವಾದರೂ ಸಂಪೂರ್ಣ ಯಶಸ್ಸನ್ನು ನೀವು ಪಡೆಯಲಾರಿರಿ. ಸ್ತ್ರೀಗೆ ವಶವಾಗುವ ಸಂಭವವಿದೆ.

ಲೋಹಿತಶರ್ಮಾ – 8762924271 (what’s app only)

Published On - 12:20 am, Fri, 25 August 23

ತಾಜಾ ಸುದ್ದಿ
bud 4icket Booking: IRCTCಯಲ್ಲಿ ರೈಲು ಟಿಕೆಟ್ ಬುಕ್ ಮಾಡುವಾಗ ಎಚ್ಚರಿಕ
bud 4icket Booking: IRCTCಯಲ್ಲಿ ರೈಲು ಟಿಕೆಟ್ ಬುಕ್ ಮಾಡುವಾಗ ಎಚ್ಚರಿಕ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ