ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್​​ಗೆ ಅಭಿನಂದನೆ ಸಲ್ಲಿಸುವ ಭರದಲ್ಲಿ ಎಡವಟ್ಟು ಮಾಡಿಕೊಂಡ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಚಂದ್ರಯಾನ ಯಶಸ್ವಿ ಆಗುವ ಮುನ್ನ ಕಾರ್ಯಕ್ರಮವೊಂದರಲ್ಲಿ ಚಂದ್ರಯಾನದ ಬಗ್ಗೆ ಗೊಂದಲದ ಮಾತುಗಳನ್ನು ಹಾಡಿದ್ದಾರೆ. ಗಗನಯಾತ್ರಿ ರಾಕೇಶ್ ಶರ್ಮಾ ಬದಲು ಬಾಲಿವುಡ್ ನಟ-ಚಿತ್ರ ನಿರ್ಮಾಪಕ ರಾಕೇಶ್ ರೋಷನ್ ಎಂದು ಹೇಳಿದ್ದಾರೆ.

ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್​​ಗೆ ಅಭಿನಂದನೆ ಸಲ್ಲಿಸುವ ಭರದಲ್ಲಿ ಎಡವಟ್ಟು ಮಾಡಿಕೊಂಡ ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
Follow us
|

Updated on: Aug 24, 2023 | 12:14 PM

ಭಾರತವು ಬುಧವಾರದಂದು (ಆ.23) ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3 (Chandrayaan-3) ಮಿಷನ್ ಲ್ಯಾಂಡಿಂಗ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ. ಇಸ್ರೋದ ಈ ಸಾಧನೆಗೆ ದೇಶದ ಅನೇಕ ಗಣ್ಯರು ಮತ್ತು ನಟ-ನಟಿಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಆದರೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ಚಂದ್ರಯಾನ ಯಶಸ್ವಿ ಆಗುವ ಮುನ್ನ ಕಾರ್ಯಕ್ರಮವೊಂದರಲ್ಲಿ ಚಂದ್ರಯಾನದ ಬಗ್ಗೆ ಗೊಂದಲದ ಮಾತುಗಳನ್ನು ಹಾಡಿದ್ದಾರೆ. ಗಗನಯಾತ್ರಿ ರಾಕೇಶ್ ಶರ್ಮಾ ಬದಲು ಬಾಲಿವುಡ್ ನಟ-ಚಿತ್ರ ನಿರ್ಮಾಪಕ ರಾಕೇಶ್ ರೋಷನ್ ಎಂದು ಹೇಳಿದ್ದಾರೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​ ಆಗುತ್ತಿದೆ.

ವೈರಲ್​​ ವಿಡಿಯೋದಲ್ಲಿ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ಜನರ ಪರವಾಗಿ, ನಾನು ಇಸ್ರೋಗೆ ಚಂದ್ರಯಾನ ಯಶಸ್ವಿಗೂ ಮುನ್ನ ಅಭಿನಂದನೆಗಳನ್ನು ತಿಳಿಸುತ್ತೇನೆ. ಈ ಸಾಧನೆಯ ಕ್ರೆಡಿಟ್ ವಿಜ್ಞಾನಿಗಳು ಮತ್ತು ದೇಶಕ್ಕೆ ಸಲ್ಲಬೇಕು. ರಾಕೇಶ್ ರೋಷನ್ ಚಂದ್ರನ ಮೇಲೆ ಇಳಿದಾಗ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜತೆಗೆ ಸಂವಾದ ನಡೆಸಿದ್ದಾರೆ ಎಂದು ಹೇಳುವ ಮೂಲಕ ಎಡವಟ್ಟು ಮಾಡಿಕೊಂಡಿದ್ದಾರೆ. ಇಲ್ಲಿ ಮಮತಾ ಬ್ಯಾನರ್ಜಿ ಅವರು ರಾಕೇಶ್ ಶರ್ಮಾ ಎಂದು ಹೇಳುವ ಬದಲು ರಾಕೇಶ್ ರೋಷನ್ ಎಂದು ಹೇಳಿದ್ದಾರೆ.

ರಾಕೇಶ್ ಶರ್ಮಾ, ಭಾರತೀಯ ವಾಯುಪಡೆಯ ಪೈಲಟ್, 1984ರಲ್ಲಿ ಸೋವಿಯತ್ ಒಕ್ಕೂಟದ ಸೋಯುಜ್ T-11 ಭಾಗವಾಗಿ ಬಾಹ್ಯಾಕಾಶಕ್ಕೆ ಪ್ರಯಾಣಿಸಿದ ಮೊದಲ ಭಾರತೀಯರಾಗಿದ್ದರು. ದೂರದರ್ಶನದ ನೇರ ಪ್ರಸಾರದ ಮೂಲಕ ಗಗನಯಾತ್ರಿಗಳು ಬಾಹ್ಯಾಕಾಶದಿಂದ ಆಗಿನ ಪ್ರಧಾನಿ ಇಂದಿರಾ ಗಾಂಧಿ ಅವರೊಂದಿಗೆ ಮಾತನಾಡಿದರು.

ಇದನ್ನೂ ಓದಿ: ಸಂವಹನ ನಡೆದಿದೆ; ಚಂದ್ರನಲ್ಲಿ ಇಳಿದ ನಂತರ ಮೊದಲ ಚಿತ್ರ ಹಂಚಿಕೊಂಡ ವಿಕ್ರಮ್ ಲ್ಯಾಂಡರ್

ಇಂದಿರಾ ಗಾಂಧಿಯವರು ರಾಕೇಶ್​​ ಶರ್ಮಾ ಅವರ ಜತೆಗೆ ಮಾತನಾಡಿದ್ದು ಹೀಗೆ “ಉಪರ್ ಸೆ ಭಾರತ್ ಕೈಸಾ ದಿಖ್ತಾ ಹೈ ಆಪ್ಕೋ?” (ಬಾಹ್ಯಾಕಾಶದಿಂದ ಭಾರತವು ಹೇಗೆ ಕಾಣುತ್ತದೆ?) ಎಂದು ಕೇಳುತ್ತಾರೆ. ಅದಕ್ಕೆ ಉತ್ತರಿಸಿದ ರಾಕೇಶ್​​ ಶರ್ಮಾ ಅವರು ಕವಿ ಇಕ್ಬಾಲ್ ಅವರನ್ನು ಉಲ್ಲೇಖಿಸಿ, “ಸಾರೆ ಜಹಾನ್ ಸೆ ಅಚ್ಚಾ” (ಇಡೀ ಪ್ರಪಂಚಕ್ಕಿಂತ ಉತ್ತಮ) ಎಂದು ಹೇಳುವ ಮೂಲಕ ಪ್ರತಿಕ್ರಿಯಿಸಿದರು. ಆದರೆ ಈ ಘಟನೆಯನ್ನು ಹೇಳುವ ಭರದಲ್ಲಿ ಮಮತಾ ಬ್ಯಾನರ್ಜಿ ಅವರು ರಾಕೇಶ್​​ ಶರ್ಮಾ ಹೇಳುವ ಬದಲು ರಾಕೇಶ್​​ ರೋಷನ್ ಎಂದು ಹೇಳಿ, ಎಲ್ಲ ಕಡೆ ಟ್ರೋಲ್​​ ಆಗಿದ್ದಾರೆ.

ಇನ್ನು ಚಂದ್ರಯಾನ-3 ಸಂಬಂಧಿತ ಗೂಫ್-ಅಪ್‌ನಲ್ಲಿ ಮಮತಾ ಬ್ಯಾನರ್ಜಿ ಮಾತ್ರವಲ್ಲ, ರಾಜಸ್ಥಾನದ ಸಚಿವರೊಬ್ಬರು ಕೂಡ ವೈರಲ್​​ ಆಗುತ್ತಿದ್ದಾರೆ. ಚಂದ್ರಯಾನ -3 ಮಿಷನ್‌ನ ಪ್ರಯಾಣಿಕರಿಗೆ ಅಭಿನಂದನೆ ಎಂದು ಹೇಳಿದ್ದಾರೆ. ಆದರೆ ಈ ಚಂದ್ರಯಾನ -3 ಮಾನವರಹಿತ ಮಿಷನ್ ಆಗಿರುವ ಕಾರಣ, ಮಾತಿನ ಭರದಲ್ಲಿ ಈ ಎಡವಟ್ಟು ಮಾಡಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ.

ಬುಧವಾರದಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡಿಂಗ್​​ ಆಗಿರುವ ಪ್ರಗ್ಯಾನ್ ರೋವರ್ ಮುಂದಿನ 14 ದಿನಗಳವರೆಗೆ ಚಂದ್ರನ ಮೇಲ್ಮೈಯನ್ನು ಅನ್ವೇಷಿಸುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ