ನವರಾತ್ರಿ 2021 ಏಳನೇ ದಿನ: ಈ ದಿನ ದುರ್ಗೆ ಭಯಂಕರ ರೂಪದಲ್ಲಿ ಕಾಣಿಸಿಕೊಳ್ತಾಳೆ ಏಕೆ?

Navratri 2021: ರಕ್ತಬೀಜಾಸುರನನ್ನು ವಧಿಸುವ ಸಲುವಾಗಿ ದುರ್ಗೆ ಕಾಲರಾತ್ರಿಯ ರೂಪವನ್ನು ತಾಳುತ್ತಾಳೆ. ರಕ್ತಬೀಜಾಸುರನನ್ನು ಕೊಂದು ರಕ್ತಬೀಜಾಸುರನ ರಕ್ತದ ಒಂದು ಹನಿಯೂ ಕೆಳಗೆ ಬೀಳದಂತೆ ಕುಡಿದು ಮದದಿಂದ ನರ್ತಿಸುತ್ತಾಳೆ.

Important Highlight‌
ನವರಾತ್ರಿ 2021 ಏಳನೇ ದಿನ: ಈ ದಿನ ದುರ್ಗೆ ಭಯಂಕರ ರೂಪದಲ್ಲಿ ಕಾಣಿಸಿಕೊಳ್ತಾಳೆ ಏಕೆ?
ಕಾಲರಾತ್ರಿ
Follow us
| Updated By: shruti hegde

Updated on: Oct 13, 2021 | 8:13 AM

ನವದುರ್ಗೆಯರಲ್ಲಿ ಕಾಲರಾತ್ರಿಯದ್ದು ಏಳನೇ ರೂಪ. ದುಷ್ಟರ ವಿನಾಶ ಮಾಡುವ ಈ ದೇವಿಯದ್ದು ಅತ್ಯಂತ ಭಯಂಕರ ರೂಪ. ಇವಳ ವಾಹನ ಕತ್ತೆ. ಈ ದೇವಿಯ ಶರೀರ ದಟ್ಟವಾದ ಅಂಧಕಾರದಂತೆ ಕಪ್ಪಾಗಿದೆ. ತಲೆಕೂದಲನ್ನು ಭಯಂಕರವಾಗಿ ಹರಡಿಕೊಂಡಿದ್ದಾಳೆ. ಕತ್ತು, ಕೈ ಕಾಲುಗಳಲ್ಲಿ ಮಿಂಚಿನಂತೆ ಹೊಳೆಯುವ ಮಾಲೆ ಇದೆ. ಬ್ರಹ್ಮಾಂಡದಂತಹ 3 ಕಣ್ಣುಗಳಿವೆ. ಇವಳ ಕಣ್ಣುಗಳು ಭಕ್ತರನ್ನು ಭಯಗೊಳಿಸುತ್ತೆ. ಇವಳು ಉಸಿರಾಡಿದ್ರೆ ಅಗ್ನಿ ಜ್ವಾಲೆ ಹೊರಹೊಮ್ಮುತ್ತೆ. ಇವಳಿಗೆ ನಾಲ್ಕು ಭುಜಗಳಿವೆ. ಬಲಭಾಗದ ಎರಡು ಕೈ ವರಮುದ್ರೆ, ಅಭಯ ಮುದ್ರೆಯಲ್ಲಿವೆ. ಎಡಗೈಗಳಲ್ಲಿ ಖಡ್ಗ ಮತ್ತು ಕಬ್ಬಿಣದ ಮುಳ್ಳಿನ ಅಸ್ತ್ರವಿದೆ. ಈಕೆ ಅಸುರರ ಪಾಲಿಗೆ ದುಃಸ್ವಪ್ನ. ಧರ್ಮದ ರಕ್ಷಣೆಗಾಗಿ, ಅಧರ್ಮರ ಪಾಲಿಗೆ ಭಯ ಹುಟ್ಟಿಸುವವಳು ಈಕೆ. ಆದರೆ ತನ್ನನ್ನು ಪೂಜಿಸುವ ಭಕ್ತರ ಪಾಲಿಗೆ ಮಾತ್ರ ಮಾತೃಸ್ವರೂಪಿಣಿಯಾದ ಪಾರ್ವತಿಯಾಗಿರುವವಳು.

ರಕ್ತಬೀಜಾಸುರನನ್ನು ವಧಿಸುವ ಸಲುವಾಗಿ ದುರ್ಗೆ ಕಾಲರಾತ್ರಿಯ ರೂಪವನ್ನು ತಾಳುತ್ತಾಳೆ. ರಕ್ತಬೀಜಾಸುರನನ್ನು ಕೊಂದು ರಕ್ತಬೀಜಾಸುರನ ರಕ್ತದ ಒಂದು ಹನಿಯೂ ಕೆಳಗೆ ಬೀಳದಂತೆ ಕುಡಿದು ಮದದಿಂದ ನರ್ತಿಸುತ್ತಾಳೆ. ಶಿವನ ಎದೆಯ ಮೇಲೆ ಕಾಲಿಟ್ಟ ನಂತರ ಆಕೆಯು ಸಹಜ ಸ್ಥಿತಿಗೆ ಬರುತ್ತಾಳೆ. ಈಕೆಯನ್ನು ಆರಾಧಿಸುವವರ ಮನಸ್ಸು ಸಹಸಾರ ಚಕ್ರದಲ್ಲಿ ಸ್ಥಿತಗೊಂಡು ಪಾಪ ಹಾಗೂ ವಿಘ್ನಗಳು ನಾಶವಾಗಿ ಪುಣ್ಯಲೋಕ ಪ್ರಾಪ್ತಿಯಾಗುವುದು ಎನ್ನಲಾಗುತ್ತೆ.

ಕಾಲರಾತ್ರಿಯ ಪೂಜೆ ಹೇಗೆ ಮಾಡಬೇಕು? ರಾತ್ರಿ ಅರಳುವ ಮಲ್ಲಿಗೆ ಹೂವು ಕಾಲರಾತ್ರಿಗೆ ಅರ್ಪಿಸಲು ಪ್ರಸಕ್ತವಾದ ಹೂವು. ಕಾಲರಾತ್ರಿಗೆ ಪೂಜೆ ಸಲ್ಲಿಸುವ ಮೊದಲು ಗಣೇಶನಿಗೆ ಪೂಜೆ ಸಲ್ಲಿಸಬೇಕು. ಬಳಿಕ ಕಾಲರಾತ್ರಿಗೆ ಷೋಡಶೋಪಚಾರ ಪೂಜೆಯನ್ನು ಮಾಡಬೇಕು. ಆರತಿಯೊಂದಿಗೆ ಪೂಜೆ ಕೊನೆಗೊಳಿಸಬೇಕು. ಈ ದಿನ ದೇವಿಗೆ ಅನ್ನದಿಂದ ಮಾಡಿದ ನೈವೇದ್ಯ ಅಥವಾ ಎರಿಯಪ್ಪ ಅರ್ಪಿಸಬಹುದು.

ಕಾಲರಾತ್ರಿ ಮಂತ್ರ ಏಕವೇಣೀ ಜಪಾಕರ್ಣಪೂರಾ ನಗ್ನಾ ಖರಾಸ್ಥಿತಾ ಲಂಬೋಷ್ಠೀ ಕರ್ಣಿಕಾಕರ್ಣೀ ತೈಲಾಭ್ಯಕ್ತ ಶರೀರಿಣೀ ವಾಮಪಾದೋಲ್ಲ ಸಲ್ಲೋಹಲತಾ ಕಂಟಕಭೂಷಣಾ ವರ್ಧನಮೂರ್ಧಧ್ವಜಾ ಕೃಷ್ಣಾ ಕಾಲರಾತ್ರಿರ್ಭಯಂಕರೀ ಈ ದೇವಿ ನೋಡೋಕೆ ಎಷ್ಟು ಭಯಂಕರವಾಗಿದ್ದಾಳೋ, ಅಷ್ಟೇ ಶುಭಫಲಗಳನ್ನು ಕೊಡುವವಳು. ಹೀಗಾಗೇ ಇವಳಿಗೆ ಶುಭಂಕರೀ ಎಂಬ ಹೆಸರೂ ಇದೆ. ಕಾಲರಾತ್ರಿ ದೇವಿ ದುಷ್ಟರಿಗೆ ಮೃತ್ಯುದೇವತೆಯಾದ್ರೆ, ಶಿಷ್ಟರಿಗೆ ರಕ್ಷಾಕವಚ. ಈಕೆ ಧರ್ಮವನ್ನು ರಕ್ಷಣೆ ಮಾಡಿ ಪಾಪ ನಾಶ ಮಾಡುತ್ತಾಳೆ. ನವರಾತ್ರಿಯಲ್ಲಿ ಇವಳ ಉಪಾಸನೆ ಅತ್ಯಂತ ಫಲದಾಯಕ. ಹಾಗಾದ್ರೆ ಈ ದೇವಿ ಆರಾಧನೆಯಿಂದ ಸಿಗುವ ಫಲಗಳೇನು? ಕಾಲರಾತ್ರಿ ಪೂಜಾ ಫಲಗಳು * ಈ ದೇವಿಯನ್ನು ಆರಾಧಿಸಿದ್ರೆ ವಿಘ್ನಗಳು ದೂರಾಗುತ್ತವೆ * ಪುಣ್ಯಪ್ರಾಪ್ತಿಯಾಗುತ್ತೆ * ದುಷ್ಟಶಕ್ತಿಗಳ ಕಾಟ ದೂರಾಗುತ್ತೆ * ಗ್ರಹ ಬಾಧೆಗಳು ದೂರಾಗುತ್ತೆ * ಶತ್ರುಭಯ ನಿವಾರಣೆಯಾಗುತ್ತೆ * ಸಮಸ್ತ ಪಾಪ ನಾಶ ಮಾಡ್ತಾಳೆ

ಇದನ್ನೂ ಓದಿ: Durga Puja: ನವರಾತ್ರಿಯ ಆರನೇ ದಿನ ಕೆಂಪು ಬಣ್ಣ ಶ್ರೇಷ್ಠ; ಈ ವಿಶೇಷ ಶೈಲಿಯ ದಿರಿಸುಗಳನ್ನು ನೀವು ಧರಿಸಬಹುದು

ತಾಜಾ ಸುದ್ದಿ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ