ರೋಹಿತ್, ಹಾರ್ದಿಕ್ ಯೋ-ಯೋ ಟೆಸ್ಟ್ ರಿಸಲ್ಟ್ ಔಟ್: ಪರೀಕ್ಷೆಗೆ ಹಾಜರಾಗದ ಕೆಎಲ್ ರಾಹುಲ್

Rohit Sharma And Hardik Pandya Clear ‘Yo Yo’ Test: ಕೊಹ್ಲಿ ಬಳಿಕ ಇದೀಗ ನಾಯಕ ರೋಹಿತ್ ಶರ್ಮಾ ಹಾಗೂ ಉಪ ನಾಯಕ ಹಾರ್ದಿಕ್ ಪಾಂಡ್ಯ ಕೂಡ ಯೋ-ಯೋ ಟೆಸ್ಟ್​ನಲ್ಲಿ ಪಾಸ್ ಆಗಿದ್ದಾರೆ. ಕೆಎಸ್‌ಸಿಎ-ಆಲೂರ್ ಮೈದಾನದಲ್ಲಿ ರೋಹಿತ್, ರಾಹುಲ್ ಪರೀಕ್ಷೆಯಲ್ಲಿ ಭಾಗವಹಿಸಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

ರೋಹಿತ್, ಹಾರ್ದಿಕ್ ಯೋ-ಯೋ ಟೆಸ್ಟ್ ರಿಸಲ್ಟ್ ಔಟ್: ಪರೀಕ್ಷೆಗೆ ಹಾಜರಾಗದ ಕೆಎಲ್ ರಾಹುಲ್
Hardik Pandya and Rohit Sharma
Follow us
| Updated By: Vimal Kumar

Updated on: May 09, 2024 | 11:54 AM

ಬಹುನಿರೀಕ್ಷಿತ ಏಷ್ಯಾಕಪ್ 2023 (Asia Cup 2023) ಆರಂಭಕ್ಕೆ ದಿನಗಣನೆ ಶುರುವಾಗಿದೆ. ಆಗಸ್ಟ್ 30 ರಂದು ಈ ಟೂರ್ನಿಗೆ ಚಾಲನೆ ಸಿಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ನೇಪಾಳ ತಂಡಗಳು ಮುಖಾಮುಖಿ ಆಗಲಿದೆ. ಈ ಬಾರಿಯ ಏಷ್ಯಾಕಪ್ ಹೈಬ್ರಿಡ್ ಮಾದರಿಯಲ್ಲಿ ಪಾಕಿಸ್ತಾನ ಹಾಗೂ ಶ್ರೀಲಂಕಾದಲ್ಲಿ ನಡೆಯಲಿದೆ. ಭಾರತದ ಎಲ್ಲ ಪಂದ್ಯಗಳು ಸಿಂಹಳೀಯರ ನಾಡಲ್ಲಿ ಆಯೋಜಿಸಲಾಗಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸ ಶುರುಮಾಡಿಕೊಂಡಿದ್ದಾರೆ.

ಈಗಾಗಲೇ ಬೆಂಗಳೂರಿನ ಎನ್​ಸಿಎಗೆ ಬಂದಿರುವ ಭಾರತೀಯ ಆಟಗಾರರು ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. ಏಷ್ಯಾಕಪ್​ಗೆ ಆಯ್ಕೆ ಆಗಿರುವ ಎಲ್ಲ ಆಟಗಾರರು ಯೋ-ಯೋ ಟೆಸ್ಟ್​ನಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕಿದ್ದು, ಇದರಲ್ಲಿ ತೇರ್ಗಡೆ ಆಗಬೇಕಿದೆ. ವಿರಾಟ್ ಕೊಹ್ಲಿ ಮೊದಲಿಗರಾಗಿ ಯೋ-ಯೋ ಟೆಸ್ಟ್‌ಗೆ ಒಳಗಾಗಿ, ಈ ಟೆಸ್ಟ್‌ನಲ್ಲಿ 17.2 ಅಂಕ ಸಂಪಾದಿಸುವುದರೊಂದಿಗೆ ತೇರ್ಗಡೆಗೊಂಡಿದ್ದಾರೆ. ಈ ವಿಚಾರವನ್ನು ಸ್ವತಃ ಕೊಹ್ಲಿ ಅವರೇ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದರು.

PAK vs AFG: ಕೊನೆಯ ಓವರ್ ಡ್ರಾಮಾ; ಅಫ್ಘಾನ್ ವಿರುದ್ಧ ಪಾಕಿಸ್ತಾನಕ್ಕೆ ರೋಚಕ ಜಯ

ಇದನ್ನೂ ಓದಿ
Image
Virat Kohli: ನಿಯಮ ಮುರಿದ ಕಿಂಗ್ ಕೊಹ್ಲಿಗೆ ವಾರ್ನಿಂಗ್ ನೀಡಿದ ಬಿಸಿಸಿಐ! ಅ
Image
ಕಷ್ಟದ ದಿನಗಳಲ್ಲಿ ಧೋನಿಯ ಕೈ ಹಿಡಿದಿದ್ರು ನಮ್ಮ ರೆಬೆಲ್​ಸ್ಟಾರ್; ಫೋಟೋ ಮೂಲಕ
Image
ಚೆಸ್ ವಿಶ್ವಕಪ್​ನಲ್ಲಿ ರನ್ನರ್​ಅಪ್ ಆದ ಪ್ರಜ್ಞಾನಂದಗೆ ಸಿಕ್ಕ ಒಟ್ಟು ಹಣವೆಷ್
Image
Asian Games 2023: ಏಷ್ಯನ್ ಗೇಮ್ಸ್‌ಗೆ ಪಾಕ್ ತಂಡ ಪ್ರಕಟ; 20 ವರ್ಷದ ಆಲ್‌ರ

ಕೊಹ್ಲಿ ಬಳಿಕ ಇದೀಗ ನಾಯಕ ರೋಹಿತ್ ಶರ್ಮಾ ಹಾಗೂ ಉಪ ನಾಯಕ ಹಾರ್ದಿಕ್ ಪಾಂಡ್ಯ ಕೂಡ ಯೋ-ಯೋ ಟೆಸ್ಟ್​ನಲ್ಲಿ ಪಾಸ್ ಆಗಿದ್ದಾರೆ. ಕೆಎಸ್‌ಸಿಎ-ಆಲೂರ್ ಮೈದಾನದಲ್ಲಿ ರೋಹಿತ್, ಹಾರ್ದಿಕ್ ಪರೀಕ್ಷೆಯಲ್ಲಿ ಭಾಗವಹಿಸಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. “ಪರೀಕ್ಷೆಗಳು ಯಶಸ್ವಿಯಾಗಿವೆ ಮತ್ತು ವರದಿಗಳನ್ನು ಶೀಘ್ರದಲ್ಲೇ ಬಿಸಿಸಿಐಗೆ ಕಳುಹಿಸಲಾಗುವುದು” ಎಂದು ಮೂಲಗಳು ಪಿಟಿಐಗೆ ತಿಳಿಸಿದೆ. ಆದರೆ, ಫಿಟ್‌ನೆಸ್‌ ಪ್ರಮುಖವಾಗಿರುವ ಕೆಎಲ್‌ ರಾಹುಲ್‌ ಇನ್ನೂ ಈ ಟೆಸ್ಟ್‌ನಲ್ಲಿ ಭಾಗವಹಿಸಿಲ್ಲ ಎಂದು ತಿಳಿದುಬಂದಿದೆ.

ಯೋ-ಯೋ ಟೆಸ್ಟ್ ಮಾತ್ರವಲ್ಲದೆ ಶಿಬಿರದಲ್ಲಿ ಲಿಪಿಡ್ ಪ್ರೊಫೈಲ್, ಬ್ಲಡ್ ಶುಗರ್, ಯೂರಿಕ್ ಆಸಿಡ್, ಕ್ಯಾಲ್ಸಿಯಂ, ವಿಟಮಿನ್ ಬಿ 12 ಮತ್ತು ಡಿ, ಕ್ರಿಯೇಟಿನೈನ್, ಟೆಸ್ಟೋಸ್ಟೆರಾನ್ ಮತ್ತು ಡೆಕ್ಸಾ ಪರೀಕ್ಷೆಗಳು ಸೇರಿದಂತೆ ಆಟಗಾರರನ್ನು ಅನೇಕ ರೀತಿಯಲ್ಲಿ ಪರಿಶೀಲಿಸಲಾಗುತ್ತದೆ. ಫಿಟ್‌ನೆಸ್ ಹೊರತಾಗಿ, ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಮತ್ತು ಮುಖ್ಯ ತರಬೇತುದಾರ ರಾಹುಲ್ ದ್ರಾವಿಡ್ ಮೂಲಕ ಮ್ಯಾಚ್ ಸಿಮ್ಯುಲೇಶನ್ ಸೆಷನ್ ಅನ್ನು ಸಹ ಏರ್ಪಡಿಸಲಾಗಿದೆ.

ಈ ಮೂಲಕ ರಾಹುಲ್ ದ್ರಾವಿಡ್ ಮತ್ತು ಟೀಮ್ ಇಂಡಿಯಾದ ಎಲ್ಲ ಆಟಗಾರರು ಎನ್​ಸಿಎನಲ್ಲಿ ತರಭೇತಿ ಆರಂಭಿಸಿದ್ದಾರೆ. ಏಷ್ಯಾಕಪ್​ಗೆ ಆಯ್ಕೆ ಆದ ಎಲ್ಲ ಆಟಗಾರರು ಇಲ್ಲಿ ಒಟ್ಟುಗೂಡಿದ್ದಾರೆ. ಸಂಜು ಸ್ಯಾಮ್ಸನ್, ಪ್ರಸಿದ್ಧ್ ಕೃಷ್ಣ ಮತ್ತು ಜಸ್​ಪ್ರಿತ್ ಬುಮ್ರಾ ಐರ್ಲೆಂಡ್​ನಿಂದ ಹೊರಟು ಇಂದು ಅಥವಾ ನಾಳೆ ತಂಡ ಸೇರಿಕೊಳ್ಳಲಿದ್ದಾರೆ. ಏಷ್ಯಾಕಪ್ 2023 ತರಬೇತಿ ಶಿಬಿರವು ಆಗಸ್ಟ್ 29 ರವರೆಗೆ ಇರಲಿದೆ. ಭಾರತ ಆಗಸ್ಟ್ 30 ರಂದು ಕೊಲಂಬೋಕ್ಕೆ ತೆರಳಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:48 am, Fri, 25 August 23

ತಾಜಾ ಸುದ್ದಿ
bud 4icket Booking: IRCTCಯಲ್ಲಿ ರೈಲು ಟಿಕೆಟ್ ಬುಕ್ ಮಾಡುವಾಗ ಎಚ್ಚರಿಕ
bud 4icket Booking: IRCTCಯಲ್ಲಿ ರೈಲು ಟಿಕೆಟ್ ಬುಕ್ ಮಾಡುವಾಗ ಎಚ್ಚರಿಕ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ